AgroStar
ಎಲ್ಲಾ ಬೆಳೆಗಳು
ಕೃಷಿ ಜ್ಞಾನ
ಕೃಷಿ ಚರ್ಚೆಗಳು
ಅಗ್ರಿ ಶಾಪ್
ಈಗ ರೈತರಿಗೆ ಈ ಮೂಲಕ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಸಿಗಲಿದೆ
ಕೃಷಿ ವಾರ್ತಾಪ್ರಭಾತ,
ಈಗ ರೈತರಿಗೆ ಈ ಮೂಲಕ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಸಿಗಲಿದೆ
ದೇಶದಲ್ಲಿ ಲಕ್ಷಾಂತರ ರೈತರು ಓದಲು ಸಾಧ್ಯವಿಲ್ಲ, ಆದರೆ ಅವರು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ಅವರ ಅನುಕೂಲಕ್ಕಾಗಿ ಸರ್ಕಾರ ಕಾಲ್ ಸೆಂಟರ್ ಪ್ರಾರಂಭಿಸಲಿದೆ. ಪಿಎಂ ಕಿಸಾನ್ ಕಾಲ್ ಸೆಂಟರ್ ಗೆ ಕರೆ ಮಾಡಿದ ನಂತರ ಎಲ್ಲಾ ಮಾಹಿತಿಗಳು ರೈತರಿಗೆ ಲಭ್ಯವಾಗಲಿದೆ.
ಕೇಂದ್ರ ಸರ್ಕಾರ ಈ ವರ್ಷ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯ ಬಗ್ಗೆ ರೈತರಿಗೆ ಸಾಕಷ್ಟು ಮಾಹಿತಿ ಲಭ್ಯವಿಲ್ಲ. ಈ ಕಾಲ್ ಸೆಂಟರ್ ರಚಿಸುವ ಹಿಂದಿನ ಉದ್ದೇಶ ರೈತರಿಗೆ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ನೀಡುವುದು. ಈ ಯೋಜನೆಯ ಪ್ರಕಾರ ರೈತರಿಗೆ ವರ್ಷಕ್ಕೆ ಎರಡು ಸಾವಿರ ರೂಪಾಯಿಗಳ ಕಂತುಗಳಲ್ಲಿ 6000 ರೂ ನೀಡಲಾಗುವುದು. ಪ್ರಸ್ತುತ ರೈತರಿಗೆ ದೂರವಾಣಿ ಸಂಖ್ಯೆಯನ್ನು ಒದಗಿಸಲಾಗಿದೆ. ಆದರೆ, ಇದು ಸಾಕಷ್ಟು ಮಾಹಿತಿ ನೀಡುತ್ತಿಲ್ಲ ಎಂದು ರೈತರು ಕಾಲಕಾಲಕ್ಕೆ ದೂರು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ಕೃಷಿ ಇಲಾಖೆಯ ಅಧಿಕಾರಿಗಳು 24 ಗಂಟೆಗಳ ಕಾಲ್ ಸೆಂಟರ್ ಪ್ರಾರಂಭಿಸಲು ಪ್ರಯತ್ನಿಸುತಿದ್ದಾರೆ ಎಂದು ಹೇಳಿದರು. ಈ ಕರೆ ಕೇಂದ್ರಗಳು ಅನೇಕ ಭಾಷೆಗಳಲ್ಲಿ ಲಭ್ಯವಿರುತ್ತವೆ. ಅಲ್ಲದೆ, ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರ ವಹಿಸಲಾಗುವುದು. ರೈತರ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಸೂಕ್ತ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನೀಡಿದ ನಂತರವೇ ಯೋಜನೆಯ ವಿವರಗಳು ಲಭ್ಯವಾಗುತ್ತವೆ. ಮೂಲ - ಪ್ರಭಾತ, 24 ಅಕ್ಟೋಬರ್ 2019 ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.
221
0